ಕವನ ವಾಚನ - Kannada Kavana Vaachana

ಮಾತು ಮುತ್ತು - ಕವನ ವಾಚನ

Listen on

Episode notes

ಮಾತು ಬರುವುದು ಎಂದು ಮಾತಾಡುವುದು ಬೇಡ;

ಒಂದು ಮಾತಿಗೆ ಎರಡು ಅರ್ಥವುಂಟು.

ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ;

ಬರಿದೆ ಆಡುವ ಮಾತಿಗರ್ಥವಿಲ್ಲ.

 

ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ;

ಮೀನು ಬೇಳುವ ತನಕ ಕಾಯ ಬೇಕು.

ಮೀನ ಹೊರೆಯನು ಹೊತು ಮನೆಗೆ ಬಂದಿದ್ದಾನೆ;

ಹುಡುಕುತ್ತಲಿಹನವನು ಮುತ್ತಿಗಾಗಿ.

 

ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು.

ಮೀನಿನಿಂದಲು ನಮಗೆ ಲಾಭವುಂಟು.

ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ.

ಅವನ ದುಡಿಮೆಗೆ ಕೂಡ ಅರ್ಥವುಂಟು.

 

ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು

ಮುತ್ತಕೊಟ್ಟಳು ಅವನ ಹಸಿದ ತುಟಿಗೆ.

ಹೃದಯವನು ಕಲಕಿತ್ತು ಅವಳ ಮೌನದ ಮುತ್ತು.

ಮುತ್ತು ಸಿಕ್ಕಿತು ಎಂದು ನಕ್ಕವನು.

- ಕೆ ಎಸ್ ನರಸಿಂಹಸ್ವಾಮಿ

ಕವನ ಸಂಕಲನ: ನವಿಲದನಿ


https://sites.google.com/site/kavanasangraha/Home/ksn/naviladani